English Version 

 

 
       

 ಕರ್ನಾಟಕ  ಎನ್.ಆರ್.ಡಿ.ಎಂ.ಎಸ್  
 ಸುಸ್ಥಿರ ಅಭಿವೃದ್ಧಿಗೆ ಜಿಯೋಸ್ಪೇಷಿಯಲ್ ದತ್ತಾಂಶ

 ಕರ್ನಾಟಕ ಜಿಯೋಪೋರ್ಟಲ್ 
ಅಂತರ್ಜಾಲದ ಮೂಲಕ ಸ್ಪೇಷಿಯಲ್ ದತ್ತಾಂಶದ ವಿಶ್ಲೇಷಿತ ಮಾಹಿತಿ
ಮತ್ತು ಅನ್ವೇಷಣೆ. ಈ ಪೋರ್ಟಲ್ ನ್ನು ಸಂಪರ್ಕಿಸಲು ಕ್ಲಿಕ್ ಮಾಡಿ...

ಮಳೆನೀರು ಸಂಗ್ರಹಣೆ : ಮಾಹಿತಿ ಕೇಂದ್ರ

 

 

 

ರಾಜ್ಯಮಟ್ಟದ
ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

ಪೇಟೆಂಟ್ ಮಾಹಿತಿ ಕೇಂದ್ರ

ವಿದ್ಯಾರ್ಥಿ ಯೋಜನೆ ಕಾರ್ಯಕ್ರಮ
(SPP)

 

Student Projects Programme : 35th Series : Projects selected for sponsorship. Click on this link for details...

ಇತ್ತೀಚಿನ ಕಾರ್ಯಕ್ರಮಗಳು

ವಿವರಗಳಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸಂಕ್ಷಿಪ್ತ ಅವಲೋಕನ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ (ಕೆಎಸ್‌ಸಿಎಸ್‌ಟಿ)ಯು 1975ರಲ್ಲಿ ಸ್ಥಾಪಿತವಾಯಿತು ರಾಜ್ಯದಲ್ಲಿನ ಜನರ, ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿನ ಜನರ, ಜೀವನಮಟ್ಟವನ್ನು ಉತ್ತಮಗೊಳಿಸುವದಕ್ಕೆ ಸಂಬಂಧಿಸಿದ ಅಭಿವೃಧ್ಧಿಕಾರ್ಯಗಳನ್ನು ಕೈಗೊಳ್ಳುವುದು ಮಂಡಳಿಯ ಸ್ಥಾಪನೆಗೆ ಕಾರಣವಾಗಿದೆ.

54 ಸದಸ್ಯರನ್ನೊಳಗೊಂಡ ಮಂಡಳಿಯು ಒಂದು ಸ್ವಾಯತ್ತ ಸಂಸ್ಥೆಯಾಗಿದೆ ಮತ್ತು ರಾಜ್ಯದ ಮುಖ್ಯಮಂತ್ರಿಗಳು ಇದರ ಸಲಹಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಮಂಡಳಿಯ ಉಪಾಧ್ಯಕ್ಷರಲ್ಲೊಬ್ಬರಾಗಿರುತ್ತಾರೆ ಹಾಗೂ ಇವರು ಕಾರ್ಯಕಾರಿ ಸಮಿತಿಯ ಛೇರ್ಮನ್ ಆಗಿರುತ್ತಾರೆ. ಕಾರ್ಯಕಾರಿ ಸಮಿತಿಯು ಮಂಡಳಿಯ ಆಡಳಿತ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ ಮತ್ತು ಆಡಳಿತ ಸಿಬ್ಬಂದಿ ಇದಕ್ಕೆ ಸಹಾಯಕವಾಗಿದೆ.

ಪ್ರಸ್ತುತವಿರುವ ಬಡತನ ಮತ್ತು ನಿರುದ್ಯೊಗಕ್ಕೆ ಸಂಬಂಧಪಟ್ಟಂತೆ ರಾಜ್ಯದ ಅಭಿವೃದ್ಧಿಗೆ ಅವಶ್ಯಕವಾದ ವಿಜ್ಞಾನ ಮತ್ತು ತಂತ್ರಜ್ಞಾನದ ಅನ್ವಯಿಕತೆಗಳನ್ನು ಗುರುತಿಸಿವುದು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ನೀತಿ-ನಿಯಮಾವಳಿಗಳನ್ನು ನಿರೂಪಿಸಲು ರಾಜ್ಯ ಸರ್ಕಾರಕ್ಕೆ ಸಲಹೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಉದ್ದೇಶಗಳನ್ನು ಸಾಧಿಸಲು ಕೈಗಾರಿಕೆ, ಮಾಹಿತಿ, ಕೃಷಿ ನೀರು ಮತ್ತು ಮೀನುಗಾರಿಕೆ, ಪರಿಸರ ಸಂರಕ್ಷಣೆ ಮತ್ತು ವಿಜ್ಞಾನ ನೆಲೆಸುವಿಕೆ, ಆರೋಗ್ಯ ಮತ್ತು ಶಿಕ್ಷಣ ಮುಂತಾದ ವಿಷಯಗಳನ್ನು ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಮುಖ್ಯ ಕಾರ್ಯಕ್ಷೇತ್ರವನ್ನಾಗಿ ಮಂಡಳಿಯು ಆರಿಸಿಕೊಂಡಿದೆ. ಮಂಡಳಿಯು ಕಳೆದ ಮೂರು ದಶಕಗಳಲ್ಲಿ ಹಲವಾರು ಯೋಜನೆಗಳನ್ನು ಸಂಶೋಧನೆ ಮತ್ತು ಪ್ರಾತ್ಯಕ್ಷಿಕತೆ ಹಂತದಿಂದ ಅನುಷ್ಠಾನ ಮತ್ತು ಕಾರ್ಯರೂಪಕ್ಕೆ ತಂದಿದೆ.

ಮಂಡಳಿಯು ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿಯೇ ಕಾರ್ಯನಿರ್ವಹಿಸುತ್ತಿರುವುದು, ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ರಾಜ್ಯದ ಜನಸಾಮಾನ್ಯರಿಗೆ ಕೊಂಡೊಯ್ಯುವ ಮಂಡಳಿಯ ಹಲವಾರು ಕಾರ್ಯಕ್ರಮಗಳ ಯಶಸ್ಸಿಗೆ ಬಹುಮಟ್ಟಿಗೆ ಕಾರಣವಾಗಿದೆ. ಇದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳ ಜೊತೆಗಿನ ಸಂಬಂಧ ಮತ್ತು ಸಹಕಾರಗಳಿಗೆ ಸಮರ್ಪಕವಾದ ವಾತಾವರಣವನ್ನು ಸೃಷ್ಟಿಮಾಡುತ್ತದೆ ಮತ್ತು ಬೆಂಗಳೂರಿನಲ್ಲಿ ಹಾಗೂ ರಾಜ್ಯದ ಇತರ ಪ್ರದೇಶಗಳಲ್ಲಿರುವ ಪ್ರಮುಖ ಸಂಶೋಧನಾ ಸಂಸ್ಥೆಗಳಲ್ಲಿನ ವಿಜ್ಞಾನಿಗಳ ಜೊತೆಗೆ ಸಂಬಂಧವನ್ನು ಕಲ್ಪಿಸುತ್ತದೆ.

ದೇಶದಲ್ಲಿ ಸ್ಥಾಪಿತವಾದ ಎಲ್ಲ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಗಳಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯು ಮೊದಲನೆಯದಾಗಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು, ಇತರ ರಾಜ್ಯಗಳಿಗೆ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯನ್ನು ಒಂದು ಮಾದರಿಯನ್ನಾಗಿ ಅನುಸರಿಸಲು ಶಿಫಾರಸು ಮಾಡಿದೆ. ಮಂಡಳಿಯು ಸ್ಥಾಪನೆಯಾದ 6 ವರ್ಷದ ನಂತರವೇ ಅಂದರೆ 1981ರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ರಚನೆ ಮಾಡಿತು.

ಮಂಡಳಿಯು ಕಳೆದ ಮೂರು ದಶಕಕ್ಕೂ ಹೆಚ್ಚಿನ ತನ್ನ ಅಸ್ತಿತ್ವದಲ್ಲಿ ಸರ್ಕಾರ ಮತ್ತು ವಿಜ್ಞಾನ ಸಮುದಾಯದ ಸಹಕಾರದಿಂದ ಹಲವಾರು ಯಶಸ್ವಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಕೈಗೊಂಡಿದೆ ಮತ್ತು ಕೈಗೊಳ್ಳಲು ಇತರ ಸಂಸ್ಥೆಗಳಿಗೆ ಸಹಕಾರ ನೀಡಿದೆ. ಅಡುಗೆ ಮಾಡಲು ಮತ್ತು ಬೆಳಕಿನ ವ್ಯವಸ್ಥೆಗೆ ಶಕ್ತಿ, ಕುಡಿಯುವ ನೀರು, ಕೃಷಿ, ವ್ಯವಸಾಯ, ನೆಲೆಸಲು ಮನೆಗಳ ನಿರ್ಮಾಣ, ಮೊದಲಾದುವುಗಳು ಮಂಡಳಿಯ ಹಲವಾರು ಯಶಸ್ವಿ ಯೋಜನೆ / ಕಾರ್ಯಕ್ರಮಗಳಲ್ಲಿ ಮುಖ್ಯವಾದುವು. ಬಡತನದ ನಿವಾರಣೆ ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳು ಅತಿಮುಖ್ಯ ಪಾತ್ರವನ್ನು ವಹಿಸುತ್ತವೆ.

 

 

ಪರಿಕಲ್ಪನೆ : ಸಂಪನ್ಮೂಲಗಳ ನಿರ್ವಹಣೆಗೆ ವಿಜ್ಞಾನ ಮತ್ತು ತಂತ್ರಜ್ಙಾನದ ಬಳಕೆ, ಪರಿಸರ, ರಾಜ್ಯದ ಜನತೆಯ ಜೀವನ ಗುಣಮಟ್ಟ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಯ ಸುಧಾರಣೆ.

 

ಕಾರ್ಯನೀತಿ :  ವಿಜ್ಞಾನ ಆಧಾರಿತ ಬಳಕೆ ವಿಧಾನಗಳ ಬಗ್ಗೆ ತಿಳುವಳಿಕೆ ಮೂಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಂಯೋಜಿಸುವುದು, ಸ್ಥಳೀಯ ನಿರ್ದಿಷ್ಟ ಸಮಸ್ಯೆಗಳನ್ನು ಬಗೆಹರಿಸಲು ಸಮಾಜವು ಅನುಸರಿಸಬಲ್ಲ ಸೂಕ್ತ ತಾಂತ್ರಿಕತೆಗಳನ್ನು ಅಭಿವೃದ್ಧಿಗೊಳುಸುವುದು ಮತ್ತು ಜನಪ್ರಿಯಗೊಳಿಸುವುದು ಮತ್ತು ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಮಾನವ ಸಂಪನ್ಮೂಲಗಳನ್ನು ಉತ್ತಮಗೊಳಿಸುವುದು ಮತ್ತು ಉತ್ತೇಜಿಸುವುದು.

 

ಚಾಲ್ತಿಯಲ್ಲಿರುವ ಯೋಜನೆಗಳು
ಮತ್ತು ಕಾರ್ಯಕ್ರಮಗಳು

ವಿವರಗಳಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ : 2012
ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ
ದಿನಾಂಕ : 18ನೇ ಫೆಬ್ರವರಿ 2012

ವಿವರಗಳಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

 

2010ನೇ ವರ್ಷದ
ವಿಜ್ಞಾನಿ ಮತ್ತು ಇಂಜಿನಿಯರ್
ರಾಜ್ಯ ಪ್ರಶಸ್ತಿ ವಿಜೇತರರು ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ
.

ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ...


 

Click on this link for details

 


Click on this link for details

 
 

 

 
   


(Click on this link for details...)

 

 

 

 
 Click on this link to view file in pdf format

 

 

A booklet "Amruthavarshini - A Guide for Rainwater Harvesting" is available at Karnataka State Council for Science and Technology, Indian Institute of Science, Bangalore 560012. Click on this link for details of Rainwater Harvesting...

Access KSCST Webmail
(for KSCST officials only)

 

 

 

 

 ||  Home  || Web mail || Ongoing Projects || Current Events || People || Contact Us || Sitemap ||
 || Link to IISc Website ||  Karnataka NRDMS || KSSDI Geoportal || Patent Information Centre ||
 || Rainwater Harvesting || Student Project Programme ||  Right to Information Act ||

 

 

 

 

 

 

Search by

www IISc KSCST

This website is visited

tumblr tracker
times since January 2007

 

This page was updated on : Saturday, February 18, 2012 01:12 PM

 

This site is best viewed using Microsoft Internet Explorer Ver. 6 and above
with screen resolution 800 x 600 and above.
 

Copyright : Karnataka State Council for Science and Technology